ಕಿತ್ತೂರು ವಿಜಯ
ಬೆಂಗಳೂರು: ಚಾಮರಾಜನಗರ ಸಂಸದರು ರಾಜ್ಯದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ (76) ಇಂದು ನಿಧನರಾದರು.
ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರು ಮಣಿಪಾಲ
ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.
ವಿ. ಶ್ರೀನಿವಾಸ ಪ್ರಸಾದ್ ಅವರು ಬಹು ಅಂಗಾಂಗ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಅಧಿಕ ರಕ್ತದೊತ್ತಡ ಮಧುಮೇಹ ಪ್ರಮಾಣದಲ್ಲಿ ಭಾರಿ ಏರುಪೇರಿನ ಕಾರಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಅವರು ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದುಬಂದಿದೆ.