ನೇಹಾ ಹಿರೇಮಠ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಸಾಂತ್ವನ ಹೇಳಿದರು

ಕಿತ್ತೂರು ವಿಜಯ 
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ದಿನಾಂಕ 18-4-2024 ರಂದು ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯನವರು ಮೃತ ನೇಹಾಳ ತಂದೆ-ತಾಯಿಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಇದೇ ವೇಳೆ ನೇಹಾ ಹತ್ಯೆಯ ಆರೋಪಿ ಫಯಾಜ್ ಮುನವಳ್ಳಿಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿ ನೇಹಾ ತಂದೆ ನಿರಂಜನ ಹಿರೇಮಠ ಅವರಿಗೆ ಧೈರ್ಯ ತುಂಬಿದರು.
ಈ ವೇಳೆ ಸಚಿವ ಸಂತೋಷ್ ಲಾಡ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Post a Comment

Previous Post Next Post
ಸುದ್ದಿ ಮತ್ತು ಜಾಹಿರಾತುಗಾಗಿ‌ ಸಂಪರ್ಕಿಸಿ : (ಮಾಹಾಂತೇಶ್ ಕರಬಸನ್ನವರ) : 9844101425